ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

Betting ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಬೆಟ್ಟಿಂಗ್ ಆ್ಯಪ್ ಪ್ರಚಾರ: ಪ್ರಕಾಶ್ ರಾಜ್, ದೇವರಕೊಂಡ, ರಾಣಾ ಸೇರಿ 25 ಮಂದಿ ವಿರುದ್ಧ ಪ್ರಕರಣ ದಾಖಲು

  ಬೆಟ್ಟಿಂಗ್ ಆಪ್ ಗಳಲ್ಲಿ ಹಣ ಹಾಕಿ ಯುವ ಜನತೆ ನಷ್ಟಕ್ಕೆ ತುತ್ತಾಗಿದ್ದಾರೆ . ಈ ಆಪ್ ‌ ನಲ್ಲಿ ಹಣ ಕಳೆದುಕೊಂಡು ಹಲವು ಯುವಕರು ಆತ್ಮಹತ್ಯೆಗೆ ಶರಣಾಗಿದ್ದಾರೆ . ಹೈದರಾಬಾದ್ ‌ : ಬೆಟ್ಟಿಂಗ್ ‌ ಆ್ಯಪ್ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರಾಜ್ , ವಿಜಯ್ ದೇವರಕೊಂಡ , ರಾಣಾ ದಗ್ಗುಬಾಟಿ , ಸೇರಿದಂತೆ ಟಾಲಿವುಡ್ ' ನ 25 ಕ್ಕೂ ಹೆಚ್ಚು ನಟ - ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ . ಸಾಮಾಜಿಕ ಹೋರಾಟಗಾರ ಫಣೀಂದ್ರ ಶರ್ಮಾ ಎಂಬುವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಹೈದರಾಬಾದ್ ‌ ನ ಮಿಯಾಪುರ ಪೊಲೀಸ್ ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ . ಟಾಲಿವುಡ್ ' ನ ಹಲವು ನಟ - ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತನ್ನು ನೀಡುವ ಮೂಲಕ ಬೆಟ್ಟಿಂಗ್ ಆ್ಯಪ್ ' ನ್ನು ಪ್ರಚಾರ ಮಾಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ . ಬೆಟ್ಟಿಂಗ್ ಆಪ್ ಗಳಲ್ಲಿ ಹಣ ಹಾಕಿ ಯುವ ಜನತೆ ನಷ್ಟಕ್ಕೆ ತುತ್ತಾಗಿದ್ದಾರೆ . ಈ ಆಪ್ ‌ ನಲ್ಲಿ ಹಣ ಕಳೆದುಕೊಂಡು ಹಲವು ಯುವಕರು ಆತ್ಮಹತ್ಯೆಗೆ ಶರಣಾಗಿದ್ದಾರೆ . ಬೆಟ್ಟಿಂಗ್ ಆಪ್ ಪ್ರಚಾರಕ್ಕೆ ತೆಲಂಗಾಣ ಸರ್ಕಾರ ಈಗಾಗಲೇ ನಿಷೇಧ ಹೇರಿದೆ . ಇದರ ಹೊರತಾಗಿಯೂ ಬೆಟ್ಟಿಂ ಗ್ಆಪ್ ಪರ ಪ್ರಚಾರ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ . ಅಪ್ಲಿಕೇಶನ್ ಸ್ಟೋ...

Betting App ಜಾಹಿರಾತು: 'ತಪ್ಪು ಅಂತ ತಿಳಿಯಿತು.. ಜೀವನ ಹಾಳು ಮಾಡಿಕೊಳ್ಳಬೇಡಿ': ಕೇಸ್ ದಾಖಲು ಬೆನ್ನಲ್ಲೇ ನಟ ಪ್ರಕಾಶ್ರಾಜ್ ಹೇಳಿಕೆ

  ಅಕ್ರಮ ಬೆಟ್ಟಿಂಗ್, ಜೂಜಾಟ ಮತ್ತು ಕ್ಯಾಸಿನೊ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿ ಸಾರ್ವಜನಿಕರಿಗೆ ಆರ್ಥಿಕ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ನಟ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿದಂತೆ 25 ಜನರ ವಿರುದ್ಧ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೈದರಾಬಾದ್ :   ಅಕ್ರಮ ಬೆಟ್ಟಿಂಗ್ , ಜೂಜಾಟ ಮತ್ತು ಕ್ಯಾಸಿನೊ ಅಪ್ಲಿಕೇಶನ್ ‌ ಗಳನ್ನು ಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕೇಸ್ ದಾಖಲಾಗುತ್ತಲೇ ನಟ ಪ್ರಕಾಶ್ ರೈ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದಾರೆ . ಅಕ್ರಮ ಬೆಟ್ಟಿಂಗ್ , ಜೂಜಾಟ ಮತ್ತು ಕ್ಯಾಸಿನೊ ಅಪ್ಲಿಕೇಶನ್ ‌ ಗಳನ್ನು ಪ್ರಚಾರ ಮಾಡಿ ಸಾರ್ವಜನಿಕರಿಗೆ ಆರ್ಥಿಕ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ನಟ ರಾಣಾ ದಗ್ಗುಬಾಟಿ , ಪ್ರಕಾಶ್ ರಾಜ್ , ವಿಜಯ್ ದೇವರಕೊಂಡ , ಮಂಚು ಲಕ್ಷ್ಮಿ , ಪ್ರಣೀತಾ ಮತ್ತು ನಿಧಿ ಅಗರ್ವಾಲ್ ಸೇರಿದಂತೆ ಟಾಲಿವುಡ್ ನಟರು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಸೇರಿದಂತೆ 25 ಜನರ ವಿರುದ್ಧ ಭಾನುವಾರ ತೆಲಂಗಾಣದ ಸೈಬರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ . ನಟರಾದ ರಾಣಾ ದಗ್ಗುಬಾಟಿ ಮತ್ತು ಪ್ರಕಾಶ್ ರಾಜ್ ಅವರು ಪಾಪ್ - ಅಪ್ ಜಾಹೀರಾತುಗಳ ಮೂಲಕ ಜಂಗ್ಲೀ ರಮ್ಮಿಯನ್ನು ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ . ಇದೀಗ ಈ ಪ್ರಕರಣಕ್ಕೆ ಸಂಬಂಧಿ...